ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸುಹಾಸ್ ಸುಧಾಕರ್ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.
ತಮ್ಮ ದೀರ್ಘ ರಾಜಕೀಯ ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ಜನಪರ ನಾಯಕತ್ವದ ಮೂಲಕ ರಾಜ್ಯದ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವ ಶಕ್ತಿ ನಿಮ್ಮಲ್ಲಿದೆ.
ಈ ಹೊಸ ಜವಾಬ್ದಾರಿಯಲ್ಲಿ ಇನ್ನಷ್ಟು ಯಶಸ್ಸುಗಳು ದೊರೆಯಲಿ, ಜನರ ಆಶಯಗಳನ್ನು ಈಡೇರಿಸುವ ನಾಯಕತ್ವ ನಿಮ್ಮದಾಗಲಿ. ನಿಮ್ಮ ಮುಂದಿನ ರಾಜಕೀಯ ಪಯಣಕ್ಕೆ ಹೃತ್ಪೂರ್ವಕ ಶುಭಾಶಯಗಳು ಎಂದು ಅವರು ತಿಳಿಸಿದ್ದಾರೆ.
ಮಾಜಿ ಸಂಸದ ಬಿ.ಎನ್ ಚಂದ್ರಪ್ಪ ಸೇರಿದಂತೆ ಮತ್ತಿತರರು ಇದ್ದರು.



