Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ನೂತನ ಆದಾಯ ತೆರಿಗೆ ಕಾಯ್ದೆ ಏಪ್ರಿಲ್ 1ರಿಂದ ಜಾರಿ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ನೂತನ ಆದಾಯ ತೆರಿಗೆ ಕಾಯ್ದೆ-2025 ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ಇದರ ನಿಯಮಗಳು ಮತ್ತು ತೆರಿಗೆ ಮರುಪಾವತಿ ಕುರಿತಾದ ಫಾರ್ಮ್‌ಗಳ ಬಗ್ಗೆ ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್​ ಭಾಷಣದಲ್ಲಿ ಘೋಷಿಸಿದರು.

 ಆರು ದಶಕಗಳಷ್ಟು ಹಳೆಯದಾದ ತೆರಿಗೆ ಕಾನೂನಿಗೆ ಬದಲಾವಣೆ ತರಲಾಗಿದೆ. 2026-27ರ ಬಜೆಟ್‌ನಲ್ಲಿ ತೆರಿಗೆ ನಿಯಮಗಳಿಗೆ ತಂದಿರುವ ಬದಲಾವಣೆಗಳನ್ನು ಈ ಹೊಸ ಕಾಯ್ದೆಯಲ್ಲಿ ಸೇರ್ಪಡೆಗೊಳಿಲಾಗುವುದು ಎಂದು ವಿತ್ತ ಸಚಿವರು ತಿಳಿಸಿದರು.

ನೇರ ತೆರಿಗೆ ಸಂಹಿತೆಯು ದಾಖಲೆಯ ಸಮಯದಲ್ಲಿ ಪೂರ್ಣಗೊಂಡಿದೆ. ಆದಾಯ ತೆರಿಗೆ ಕಾಯ್ದೆ-2025 ಏಪ್ರಿಲ್ 1, 2026 ರಿಂದ ಜಾರಿಗೆ ಬರಲಿದೆ. ಸರಳೀಕೃತ ಆದಾಯ ತೆರಿಗೆ ನಿಯಮಗಳು ಮತ್ತು ಫಾರ್ಮ್‌ಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು, ತೆರಿಗೆದಾರರು ಅದರ ಅವಶ್ಯಕತೆಗಳೊಂದಿಗೆ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಸಾಕಷ್ಟು ಸಮಯ ಇರಲಿದೆ" ಎಂದು ಇದೇ ವೇಳೆ ಸಚಿವರು ತಿಳಿಸಿದರು. ಫಾರ್ಮ್‌ಗಳನ್ನು ಮರು ವಿನ್ಯಾಸಗೊಳಿಸಲಾಗಿದೆ, ಇದರಿಂದಾಗಿ ಸಾಮಾನ್ಯ ನಾಗರಿಕರು ಯಾವುದೇ ತೊಂದರೆಯಿಲ್ಲದೆ ಕಾಯ್ದೆಯನ್ನು ಅನುಸರಿಸಬಹುದು ಎಂದು ವಿವರಿಸಿದರು.


ತೆರಿಗೆಯಲ್ಲಿ ಬದಲಾವಣೆಯಿಲ್ಲ:
2025ರ ಐ-ಟಿ ಕಾನೂನು ಪ್ರಕಾರ, ತೆರಿಗೆ ದರಗಳಲ್ಲಿ ಯಾವುದೇ ಬದಲಾವಣೆಯಿಲ್ಲ. ಅಲ್ಲದೆ, ಇದು ನೇರ ತೆರಿಗೆ ಕಾನೂನುಗಳನ್ನು ಅರ್ಥಮಾಡಿಕೊಳ್ಳಲು ಸರಳವಾಗಿದೆ. ಅಸ್ಪಷ್ಟತೆಗಳನ್ನು ತೆಗೆದುಹಾಕಲಾಗಿದ್ದು, ಇದರಿಂದಾಗಿ ಮೊಕದ್ದಮೆಗಳ ವ್ಯಾಪ್ತಿಯು ಕಡಿಮೆಯಾಗಲಿದೆ. ಅಲ್ಲದೆ, 1961ರ ಆದಾಯ ತೆರಿಗೆ ಕಾಯ್ದೆಗೆ ಹೋಲಿಸಿದರೆ, ಈಗ ತೆರಿಗೆ ಸೆಕ್ಷನ್​​ಗಳು ಸುಮಾರು ಶೇಕಡಾ 50ರಷ್ಟು ಕಡಿಮೆಯಾಗಿವೆ ಎಂದರು.


ಹೊಸ ಕಾನೂನು ಮೌಲ್ಯಮಾಪನ ವರ್ಷ ಮತ್ತು ಹಿಂದಿನ ವರ್ಷದ ನಡುವಿನ ವ್ಯತ್ಯಾಸವನ್ನು ತೆಗೆದುಹಾಕುವ ಮೂಲಕ ತೆರಿಗೆ ಸಮಯ ಸರಳಗೊಳಿಸಲಿದೆ. ಅದನ್ನು ಒಂದೇ ತೆರಿಗೆ ವರ್ಷ ಎಂಬ ಚೌಕಟ್ಟಿನೊಂದಿಗೆ ಬದಲಾಯಿಸಲಿದೆ. ಯಾವುದೇ ದಂಡ ಶುಲ್ಕಗಳಿಲ್ಲದೆ, ಗಡುವಿನ ನಂತರ ಐಟಿಆರ್‌ಸಲ್ಲಿಸಿದರೂ ಸಹ ತೆರಿಗೆದಾರರು ಟಿಡಿಎಸ್ ಮರುಪಾವತಿ ಪಡೆಯಲು ಅವಕಾಶವಿರಲಿದೆ.


ಇಂದಿನ ಬಜೆಟ್​ ಭಾಷಣದ ವೇಳೆ ಇದನ್ನು ಪ್ರಕಟಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಪರಿಷ್ಕೃತ ಆದಾಯ ತೆರಿಗೆ ರಿಟರ್ನ್ಸ್​ ಸಲ್ಲಿಸಲು ಡಿಸೆಂಬರ್​ 31 ರಿಂದ ಮಾರ್ಚ್​ 31ರವರೆಗೆ ಅವಕಾಶವಿರಲಿದೆ. ಉದಾರೀಕೃತ ರವಾನೆ ಯೋಜನೆಯಡಿ ಶಿಕ್ಷಣ ಮತ್ತು ವೈದ್ಯಕೀಯ ಶಿಕ್ಷಣ ಮುಂದುವರಿಸಲು ಟಿಸಿಎಸ್ ದರವನ್ನು ಶೇಕಡಾ 5 ರಿಂದ ಶೇಕಡಾ 2ಕ್ಕೆ ಇಳಿಸಲು ಸರ್ಕಾರ ಪ್ರಸ್ತಾಪಿಸಿದೆ ಎಂದು ಸಚಿವರು ತಿಳಿಸಿದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!