Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಬಡವರು, ತುಳಿತಕ್ಕೊಳಗಾದವರು, ಅವಕಾಶಗಳಿಂದ ವಂಚಿತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅರಸು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ರಾಜ್ಯ ಕಂಡಂತಹ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು. ಬಡವರು
, ತುಳಿತಕ್ಕೊಳಗಾದವರು, ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ 43ನೇ ಪುಣ್ಯಸ್ಮರಣೆ ಅಂಗವಾಗಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಆವರಣದಲ್ಲಿರುವ ಅರಸುರವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ದಿವಂಗತ ದೇವರಾಜ ಅರಸು ಅವರ ಪುಣ್ಯತಿಥಿಯಂದು  ಸರ್ಕಾರ ಹಾಗೂ ಏಳು ಕೋಟಿ ಕನ್ನಡಿಗರ ವತಿಯಿಂದ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿ ಸ್ಮರಿಸಿದ್ದೇನೆ.

ಅರಸು ಅವರಿಂದಾಗಿ ಬಡತನ ನಿರ್ಮೂಲನೆ ಕಾರ್ಯಕ್ರಮ ಕರ್ನಾಟಕದಲ್ಲಿ ಅಚ್ಚುಕಟ್ಟಾಗಿ ನೆರವೇರಿತು. ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು. ಹಾವನೂರು ಆಯೋಗವನ್ನು ರಚನೆ ಮಾಡಿ, ಅದರ ವರದಿ ಪಡೆದು ಜಾರಿ ಮಾಡಿ ಉದ್ಯೋಗದಲ್ಲಿ ಮೀಸಲಾತಿ ಕೊಟ್ಟರು.

ಸಾಮಾಜಿಕ ನ್ಯಾಯದಲ್ಲಿ ಬಲವಾದ ನಂಬಿಕೆ ಇಟ್ಟ ದೇವರಾಜ ಅರಸು ಅವರು ನಿರ್ಗತಿಕರು, ಭೂ ರಹಿತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದರು. ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿ ಮಾಡಿ ಭೂರಹಿತರನ್ನು ಭೂ ಒಡೆಯರಾಗಿಸಿದರು. ಜೀತ ಪದ್ಧತಿಯನ್ನು ರದ್ದು ಮಾಡಿ, ಮಲ ಹೊರುವ ಪದ್ಧತಿಯನ್ನು ನಿಲ್ಲಿಸಿದರು. ಅವರ ಕಾರ್ಯಕ್ರಮಗಳ ಉದ್ದನೆಯ ಪಟ್ಟಿಯೇ ಇದೆ. ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು.

ಮೈಸೂರು ರಾಜ್ಯಕ್ಕೆ 1973 ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದ ಮುತ್ಸದ್ದಿ, ಜನಪರವಾದ ಕಾಳಜಿ, ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆಯಿರುವ ರಾಜಕಾರಣಿಯನ್ನು ಸರ್ಕಾರ ಸ್ಮರಿಸಿದೆ. ಅವರು ಮಾಡಿರುವ ಕೆಲಸಗಳು ನಮಗೆ ಸ್ಫೂರ್ತಿ ಮತ್ತು ಪ್ರೇರಣೆ. ನಮ್ಮ ಸರ್ಕಾರ ಅವರಿಂದ ಸ್ಪೂರ್ತಿ ಪಡೆದು ಸಾಮಾಜಿಕ ನ್ಯಾಯಾದೆಡೆಗೆ ದೃಢವಾದ ಹೆಜ್ಜೆಗಳನ್ನು ಇರಿಸಿದ್ದೇವೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಸಿಎಂ ತಿಳಿಸಿದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!