Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪನವರಿಗೆ ಶ್ರದ್ದಾಂಜಲಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ನಗರದ ಹೊರವಲಯ ದಾವಣಗೆರೆ ರಸ್ತೆಯಲ್ಲಿರುವ ಛಲವಾದಿ ಗುರುಪೀಠದಲ್ಲಿ ನಡೆದ ಟ್ರಸ್ಟ್‌ನ ಸಭೆಯಲ್ಲಿ ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನಮಂತಪ್ಪನವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಛಲವಾದಿ ಗುರುಪೀಠದ ಬಸವನಾಗಿದೇವಸ್ವಾಮಿ ಮಾತನಾಡಿ ಹೆಚ್.ಹನುಮಂತಪ್ಪನವರು ನಮ್ಮನ್ನೆಲ್ಲಾ ಅಗಲಿರುವುದು ಛಲವಾದಿ ಸಮಾಜಕ್ಕೆ ಅತೀವ ನೋವುಂಟಾಗಿದೆ.

ಗುರುಪೀಠದ ಅಭಿವೃದ್ದಿಯಾಗುವ ಸಮಯದಲ್ಲಿ ನಮ್ಮ ಜೊತೆ ಇರಬೇಕಿತ್ತು. ಸರ್ಕಾರದಿಂದ ಅನುದಾನ ತಂದು ಮಠದ ಕಟ್ಟುವ ಮೂಲಕ ಹೆಚ್.ಹನುಮಂತಪ್ಪವರ ಆಸೆ ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದೆಂದು ತಿಳಿಸಿದರು.

ಛಲವಾದಿ ಗುರುಪೀಠ ಟ್ರಸ್ಟ್‌ನ ಉಪಾಧ್ಯಕ್ಷ ಡಾ.ಶ್ರೀಧರಮೂರ್ತಿ ಮಾತನಾಡಿ ನಾನು ವಿದ್ಯಾಸಂಸ್ಥೆ ಆರಂಭಿಸುವಾಗ ಹೆಚ್.ಹನುಮಂತಪ್ಪವರು ಸಹಾಯ ಮಾಡಿದ್ದಾರೆ. ಅನೇಕ ವರ್ಷಗಳಿಂದ ಅವರೊಂದಿಗೆ ಒಡನಾಟವಿತ್ತು. ಎಲ್ಲರನ್ನು ಅಗಲಿರುವುದು ದುಃಖದ ಸಂಗತಿ ಎಂದು ಕಂಬನಿ ಮಿಡಿದರು.

ಟ್ರಸ್ಟ್‌ನ ಖಜಾಂಚಿ ಹೆಚ್.ಸಿ.ನಿರಂಜನಮೂರ್ತಿ ಮಾತನಾಡುತ್ತ ಛಲವಾದಿ ಗುರುಪೀಠ ಟ್ರಸ್ಟ್‌ನ ಗೌರವಾಧ್ಯಕ್ಷರಾದ್ದ ಹೆಚ್.ಹನುಮಂತಪ್ಪನವರು ಮಠದ ಬಗ್ಗೆ ಅಪಾರವಾದ ಗೌರವವಿಟ್ಟುಕೊಂಡು ಅಭಿವೃದ್ದಿ ಪಡಿಸಬೇಕೆಂದು ಹಂಬಲಿಸುತ್ತಿದ್ದರು. ಛಲವಾದಿ ಸಮಾಜದಲ್ಲಿ ಹಿರಿಯ ಮುಖಂಡರಾಗಿದ್ದ ಅವರಲ್ಲಿ ವಿದ್ವತ್ತಿತ್ತು. ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಗುರುತಿಸಿಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದರೆಂದು ಸ್ಮರಿಸಿದರು.

ಟ್ರಸ್ಟಿ ಎಸ್.ಎನ್.ರವಿಕುಮಾರ್ ಮಾತನಾಡಿ ಮಠದ ಅಭಿವೃದ್ದಿ, ಜನಾಂಗದ ವಿಚಾರ ಬಂದಾಗ ನನ್ನನ್ನು ಕರೆಸಿಕೊಂಡು ಮುಕ್ತವಾಗಿ ಮಾತನಾಡುತ್ತಿದ್ದರು. ಛಲವಾದಿ ಗುರುಪೀಠವನ್ನು ಅಭಿವೃದ್ದಿಪಡಿಸಿ ಬೇರೆ ಮಠಗಳಂತೆ ಶಕ್ತಿಶಾಲಿಯನ್ನಾಗಿ ಮಾಡಬೇಕೆಂಬ ಆಸೆಯಿಟ್ಟುಕೊಂಡಿದ್ದರು. ಸಮಾಜ ದೊಡ್ಡ ಆಸ್ತಿಯನ್ನು ಕಳೆದುಕೊಂಡು ಅನಾಥವಾಗಿದೆ. ಸರ್ಕಾರದಿಂದ ಅನುದಾನ ತಂದು ಅವರ ಆಸೆಯಂತೆ ಗುರುಪೀಠವನ್ನು ಅಭಿವೃದ್ದಿಪಡಿಸಲಾಗುವುದೆಂದರು.

ಛಲವಾದಿ ಗುರುಪೀಠದ ಟ್ರಸ್ಟ್‌ನ ಕಾರ್ಯದರ್ಶಿ ಜಿ.ಹೆಚ್.ಮೋಹನ್, ಸಹ ಕಾರ್ಯದರ್ಶಿ ನಟರಾಜ್, ನಾಗರಾಜು, ವಕೀಲರುಗಳಾದ ಬಸವರಾಜು, ಪರಮೇಶ್ ಛಲವಾದಿ ಜನಾಂಗದ ಮಂಜುಳಮ್ಮ ಇವರುಗಳು ಶ್ರದ್ದಾಂಜಲಿಯಲ್ಲಿ ಭಾಗವಹಿಸಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!