Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಭದ್ರಾ ಕಾಮಗಾರಿಗೆ ಎಸ್ಸಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಲಿ-ಲಿಂಗಾರೆಡ್ಡಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ  ಮೇಲ್ದಂಡೆ ಕಾಮಗಾರಿಗೆ ಎಸ್ಸಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ನೀರಾ್ವರಿ ಅನುಷ್ಠಾನ ಹೋರಾಟ ಸಮಿತಿ ರಾಜ್ಯ ಸರ್ಕಾರವ ಆಗ್ರಹಿಸಿದೆ.

     ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉದಾಸೀನ ಮನೋಭಾವ ಹಾಗೂ ಅನುದಾನದ ಕೊರತೆಯಿಂದಾಗಿ ಕಾಮಗಾರಿ ಹೆಚ್ಚು ಕಡಿಮೆ ಸ್ಥಗಿತಗೊಂಡಿದೆ.  5300 ಕೋಟಿ ರು ಅನುದಾನ ನೀಡಲಿ ಎಂದು ರಾಜ್ಯ ಸರ್ಕಾರ  ಕೇಂದ್ರದತ್ತ ಬೊಟ್ಟು ಮಾಡಿ್ದ್ದರೆ, ಕೇಂದ್ರ ಸರ್ಕಾರ ಅನುದಾನ ಬಿಡುಗಡೆಗಾಗಿ ತಾಂತ್ರಿಕ ಮಾಹಿತಿಗಳ ಪೂರೈಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರಗಳ ಮೇಲೆ ಪತ್ರ ಬರೆಯುತ್ತಿದೆ. ಎರಡೂ ಸರ್ಕಾರದ  ನಡೆಗಳಿಂದಾಗಿ ಭದ್ರಾ ಮೇಲ್ದಂಡೆ ಸೊರಗಿದೆ.

     ಹಾಲಿ ಶರವೇಗದಲ್ಲಿ ನಡೆಯುತ್ತಿರುವ ತುಂಗ ಭದ್ರಾ ಹಿನ್ನೀರು ಕುಡಿವ ನೀರಿನ ಎರಡುವರೆ ಸಾವಿರ ಕೋಟಿ ರುಪಾಯಿ ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರ  ಎಸ್ಪಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿದೆ.  ವಿಜಯ ನಗರ ಜಿಲ್ಲೆಯ ಕೂಡ್ಲಿಗಿ, ದಾವಣಗೆರೆ ಜಿಲ್ಲೆಯ ಜಗಳೂರು, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ತುಮಕೂರು ಜಿಲ್ಲೆಯ ಪಾವಗಡ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ ಪ್ರದೇಶಗಳಿಗೆ ತುಂಗ ಭದ್ರಾ ಜಲಾಶಯದ ಹಿನ್ನೀರಿನಿಂದ ಕುಡಿವ ನೀರು ಪೂರೈಕೆ ಮಾಡಲಾಗುತ್ತಿದೆ.

   ಈ ಯೋಜನೆಗೆ  ಎಸ್ಪಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಂಡಿರುವುದರ ಬಗ್ಗೆ  ರಾಜ್ಯ ಸರ್ಕಾರ ತನ್ನ ನೈತಿಕ ಆಯಾಮದಲ್ಲಿ ಸಮಜಾಯಿಷಿ ನಿೀಡಿದೆ. ಕೂಡ್ಲಿಗಿ, ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ವಿಧಾನಸಭೆ ಕ್ಷೇತ್ರಗಳು ಪರಿಶಿಷ್ಟ ಪಂಗಡ( ಎಸ್ಟಿ)ಕ್ಕೆ ಹಾಗೂ ಪಾವಗಡೆ ಪರಿಶಿಷ್ಟ ಜಾತಿ(ಎಸ್ಸಿ) ಗೆ ಮೀಸಲಾಗಿದೆ. ಹಾಗಾಗಿ ಈ ಸಮುದಾಯಗಳಿಗೆ ಕಾಯ್ದಿಟ್ಟ ಅನುದಾನ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದೆ.

   ತುಂಗ ಭದ್ರಾ  ಹಿನ್ನೀರು ಕಾಮಗಾರಿಗೆ  ಎಸ್ಪಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಲು ರಾಜ್ಯ ಸರ್ಕಾರ ಹರಿಯ ಬಿಟ್ಟ ಆಲೋಚನಾ ಕ್ರಮಗಳನ್ನು ಭದ್ರಾ ಮೇಲ್ದಂಡೆಗೂ ಪರಿಗಣಿಸಬೇಕೆಂದು ನೀರಾವರಿ  ಅನುಷ್ಠಾನ ಹೋರಾಟ ಸಮಿತಿ ಆಗ್ರಹಿಸುತ್ತದೆ. ಭದ್ರಾ ಮೇಲ್ದಂಡೆ ವ್ಯಾಪ್ತಿಗೆ ಹೊಳಲ್ಕೆರೆ, ಪಾವಗಡ(ಪರಿಶಿಷ್ಟ ಜಾತಿ),ಮೊಳಕಾಲ್ಮುರು, ಚಳ್ಳಕೆರೆ, ಜಗಳೂರು( ಪರಿಶಿಷ್ಟ ಪಂಗಡ) ಸೇರಿ ಐದು ಮೀಸಲು ಕ್ಷೇತ್ರಗಳು ಬರುತ್ತವೆ. ಸಾಲದೆಂಬಂತೆ ಚಿತ್ರದುರ್ಗ ಲೋಕಸಭೆ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಹಾಗಾಗಿ ತುಂಗ ಭದ್ರಾ ಹಿನ್ನೀರು ಯೋಜನೆಗೆ  ಎಸ್ಪಿಪಿ , ಟಿಎಸ್ಪಿ ಅನುದಾನ ಬಳಕೆ ಮಾಡಿದ ರೀತಿ ಭದ್ರಾ ಮೇಲ್ದಂಡೆಗೂ ವಿನಿಯೋಗಿಸಬಹುದಾಗಿದೆ.

     ತನ್ನ  ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಗೆ  ಕಳೆದ ಎರಡು ವರ್ಷಗಳಲ್ಲಿ 32 ಸಾವಿರಕೋಟಿ ರೂ ಎಸ್ಸಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಂಡಿರುವುದರ ಬಗ್ಗೆ ಶಾಸನ ಸಭೆಯಲ್ಲಿಯೇ ಸಿಎಂ ಹೇಳಿಕೆ ನೀಡಿದ್ದಾರೆ. ಗ್ಯಾರಂಟಿಗಳಿಗೆ ಎಸ್ಪಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಳ್ಳುವುದಾದರೆ  ಭದ್ರಾ ಮೇಲ್ದಂಡೆಗೆ ಏಕಿಲ್ಲವೆಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಪ್ರಶ್ನೆ ಮಾಡಿದೆ.

    ಕೇಂದ್ರ ಹಾಗೂ ರಾಜ್ಯ ಸರ್ಕಾರಗ ಉದಾಸೀನ ಮನೋಭಾವ ಗಮನಿಸಿದರೆ ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣಗೊಳಿಸಲು ಇನ್ನೊಂದು ದಶಕ ಬೇಕೆನಿಸುತ್ತದೆ. ಅಲ್ಲದೇ ಯೋಜನಾವ ವೆಚ್ಚವು ಜಾಸ್ತಿಯಾಗುತ್ತದೆ. ಯೋಜನಾ ವ್ಯಾಪ್ತಿಯಲ್ಲಿ ಬರುವ ಶಾಸಕರು ತಕ್ಷಣವೇ ಸಿಎಂ ಸಿದ್ದರಾಮಯ್ಯ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಒತ್ತಡ ಹೇರಿ  ಎಸ್ಪಿಪಿ, ಟಿಎಸ್ಪಿ ಅನುದಾನ ಪಡೆದು ಕಾಮಗಾರಿ ಪೂರ್ಣಗೊಳಿಸುವಂತೆ ಸಮಿತಿ ಆಗ್ರಹಿಸುತ್ತದೆ.

     ಕೃಷ್ಣಾ ಜಲಭಾಗ್ಯದ ರೀತಿ ಭದ್ರಾ ಮೇಲ್ದಂಡೆಗೂ ನೀರಾವರಿ ಬಾಂಡ್ ಬಿಡುಗಡೆ ಮಾ್ಡಿ ಸಂಪನ್ಮೂಲ ಕ್ರೋಡೀಕರಣ  ಮಾಡುವಂತೆ ಹಿಂದೊಮ್ಮೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ರಾಜ್ಯ ಸರ್ಕಾರವ ಆಗ್ರಹಿಸಿತ್ತು. ಈಗಲೂ ಕಾಲ ಮಿಂಚಿಲ್ಲ, ಬಾಂಡ್ ಬಿಡುಗಡೆ ಮಾಡಿದರೆ ಕೊಂಡುಕೊಳ್ಳುವವರು ಇದ್ದಾರೆ. ಸರ್ಕಾರ ಈ ಬಗ್ಗೆಯೂ ಚಿಂತಿಸಲಿ ಎಂದು ಸಮಿತಿ ಒತ್ತಾಯಿಸುತ್ತದೆ.

  ಭದ್ರಾ ಮೇಲ್ದಂಡೆ ಅನುದಾನ ಬಿಡುಗಡೆ ಸಂಬಂಧ ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದವೆ. ಈ ಸಂಬಂಧ ವಕೀಲರ ಸಂಪರ್ಕಿಸಲಾಗಿದೆ. ತುಂಗ ಭದ್ರಾ ಹಿನ್ನೀರು ಯೋಜನೆಗೆ ಎಸ್ಪಿಪಿ ಟಿಎಸ್ಪಿ ಅನುದಾನ ಬಳಕೆ ಮಾಡಿಕೊಳ್ಳಲಾಗಿದ್ದು ಅದೇ ರೀತಿ ಭದ್ರಾ ಮೇಲ್ದಂಡೆಗೂ ಬಳಕೆ ಮಾಡುವಂತೆ ಸಾರ್ವಜನಿಕ ಹಿತಾಸಕ್ತಿ ರಿಟ್ ಸಲ್ಲಿಸುವುದಾಗಿ ಬಿ.ಎ.ಲಿಂಗಾರೆಡ್ಡಿ ಹೇಳಿದರು. 

ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ, ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ, ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನ ಮಾಳಿಗೆ ಧನಂಜಯಮಾಜಿ ಅಧ್ಯಕ್ಷ ಬಸ್ತಿಹಳ್ಳಿ ಸುರೇಶ್ ಬಾಬು, ಉಪಾಧ್ಯಕ್ಷ ಮಲ್ಲಾಪುರ ತಿಪ್ಪೇಸ್ವಾಮಿ ಇದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!