Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ವೆಂಕಟರಮಣಯ್ಯ ಅಧಿಕಾರ ಸ್ವೀಕಾರ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಟಿ.ವೆಂಕಟರಮಣಯ್ಯ ಸದಸ್ಯರುಗಳಾಗಿ ಬೈರೇಗೌಡ
, ಕಂಟನಕುಂಟೆ ಕೃಷ್ಣಮೂರ್ತಿ, ಮುನಿರಾಜು ರವರುಗಳು ಅಧಿಕಾರ ಸ್ವೀಕರಿಸಿದರು.

ನಗರದ ಡಿ. ಕ್ರಾಸ್ ನಲ್ಲಿರುವ ಯೋಜನಾ ಪ್ರಾಧಿಕಾರದ ಕಛೇರಿ ಮುಂಭಾಗದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರು ಮತ್ತು ಸದಸ್ಯರು ಅಧಿಕಾರ ಪದಗ್ರಹಣ ನಡೆಯಿತು, ಈ ವೇಳೆ ಹೂಗುಚ್ಛ ನೀಡುವ ಮೂಲಕ ಅಭಿಮಾನಿಗಳು ಮತ್ತು ಕಾರ್ಯಕರ್ತರು ಅಧ್ಯಕ್ಷರನ್ನು ಹಾಗು ಸದಸ್ಯರನ್ನು  ಅಭಿನಂದಿಸಿದರು.

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಪದ ಗ್ರಹಣ ಸ್ವೀಕಾರ ಮಾಡಿದ ಟಿ.ವೆಂಕಟರಮಣಯ್ಯನವರು ಮಾತನಾಡಿ ನಗರಗಳು ಅಡ್ಡಾ ದಿಡ್ಡಿಯಾಗಿ ಬೆಳೆಯುತ್ತಿದ್ದವು, ಇದನ್ನ ಮನಗಂಡ ಸರ್ಕಾರ ನಗರ ಯೋಜನಾ ಪ್ರಾಧಿಕಾರಗಳನ್ನ ಅಸ್ತಿತ್ವಕ್ಕೆ ತಂದಿದೆ.2017ರಲ್ಲಿ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಪ್ರಾರಂಭವಾಗಿದ್ದು  ಪ್ರಾಧಿಕಾರದ ಪ್ರಕಾರವಾಗಿ ನಗರಗಳು ವಿಶಾಲವಾದ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒಳಗೊಂಡಿರಬೇಕು.

ನಗರದ ವ್ಯವಸ್ಥಿತ ಅಭಿವೃದ್ಧಿ, ಬಡಾವಣೆಗಳ ಅನುಮೋದನೆ, ಕಟ್ಟಡ ಪರವಾನಗಿ ಮತ್ತು ಭೂ ಬಳಕೆಯ ನಿಯಂತ್ರಣ.ರಸ್ತೆಗಳು, ಉದ್ಯಾನವನಗಳು, ವಸತಿ ಮತ್ತು ವಾಣಿಜ್ಯ ಪ್ರದೇಶಗಳ ಸರಿಯಾದ ವಿಂಗಡಣೆ ಹಾಗೂ ಮೂಲಭೂತ ಸೌಕರ್ಯಗಳ ಒದಗಿಸುವ ಉದ್ದೇಶದಿಂದ ಯೋಜನಾ ಪ್ರಾಧಿಕಾರ ಜಾರಿಗೆ ತರಲಾಗಿದೆ ಎಂದರು.

ಕಾನೂನು ಪ್ರಕಾರವಾಗಿ ಸದಸ್ಯರು ಸೇರಿದಂತೆ ನಾನು ಆಡಳಿತ ನಡೆಸುವ ಮೂಲಕ ಜನರ ಕೆಲಸ ಮಾಡಲಾಗುತ್ತದೆ. ನಮ್ಮದೆ ಸರ್ಕಾರ ಇದ್ದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವೀರಪ್ಪಮೊಯ್ಲಿ ಮಾರ್ಗದರ್ಶನದಲ್ಲಿ ತಾಲೂಕಿನ ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದರು.

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದಲ್ಲಿ ಹೆಸರಘಟ್ಟ, ತೂಬಗೆರೆ ಸೇರಿದಂತೆ ತಾಲೂಕಿನ ಹೋಬಳಿಗಳಿದ್ದು, ಪ್ರತಿಯೊಬ್ಬರಿಗೆ ಒಂದೊಂದು ಬಾರಿ ಅವಕಾಶ ನೀಡುವ ಕೆಲಸ ಮಾಡಲಾಗುವುದು, ಇಲ್ಲಿಯವರೆಗೂ ಯಾವುದೇ ಅಪಸ್ವರ ಕೇಳಿ ಬಂದಿಲ್ಲ ಎಂದರು.

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಇರುವುದು ನಗರಗಳ ಅಭಿವೃದ್ಧಿಗಾಗಿ ಆದರೆ ದೊಡ್ಡಬಳ್ಳಾಪುರ ನಗರ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಪ್ರತಿನಿಧಿಗೆ ಅವಕಾಶ ನೀಡಿಲ್ಲವೆಂದರು.

 ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಚುಂಚೇಗೌಡ, ಸದಸ್ಯರಾದ ಅಂಜನಮೂರ್ತಿ, ವೆಂಕಟೇಶ್, ರಾಮಣ್ಣ, ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ರವಿ ಸಿದ್ದಪ್ಪ, ಕೆಸಿಸಿ ಸದಸ್ಯ ಲಕ್ಷ್ಮೀಪತಿ, ಜಂಟಿ ಕಾರ್ಯದರ್ಶಿ ನಾಗರಾಜು ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!