ಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ 'ಸಾಹುಕಾರ್ ಜಾನಕಿ' ನಿಧನ: ಸಿಎಂ ಡಿ.ಕೆ. ಶಿವಕುಮಾರ್ ಸಂತಾಪ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತೀಯ ಚಿತ್ರರಂಗದ ದೈತ್ಯ ನಟಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ‘ಸಾಹುಕಾರ್ ಜಾನಕಿ’ ಖ್ಯಾತಿಯ ಶಂಕರಮಂಚಿ ಜಾನಕಿ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಕಂಬನಿ ಮಿಡಿದಿದ್ದಾರೆ.
ಅವರ ನಿಧನದಿಂದಾಗಿ ಚಿತ್ರರಂಗದ ಮಹಾನ್ ಕೊಂಡಿಯೊಂದು ಕಳಚಿ ಬಿದ್ದಂತಾಗಿದೆ ಎಂದು ಬಣ್ಣಿಸಿರುವ ಡಿ.ಕೆ. ಶಿವಕುಮಾರ್, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಮತ್ತು ಕಲಾಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಅಮೋಘ ಕಲಾ ಸೇವೆ: ಕನ್ನಡ, ತಮಿಳು ಹಾಗೂ ತೆಲುಗು ಸೇರಿದಂತೆ ವಿವಿಧ ಭಾಷೆಗಳ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಗೂ 300ಕ್ಕೂ ಅಧಿಕ ನಾಟಕಗಳಲ್ಲಿ ಅದ್ಭುತವಾಗಿ ನಟಿಸಿ ಕಲಾಭಿಮಾನಿಗಳ ಹೃದಯದಲ್ಲಿ ‘ಸಾಹುಕಾರ್ ಜಾನಕಿ’ ಶಾಶ್ವತ ಸ್ಥಾನ ಪಡೆದಿದ್ದಾರೆ.
ಸದಾ ಸ್ಮರಣೀಯ: ಅವರು ಕಲಾ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆ ಹಾಗೂ ರಂಗಭೂಮಿ ಸೇವೆ ಎಂದೆಂದಿಗೂ ಸ್ಮರಣೀಯವಾಗಿರಲಿದೆ.
ಚಿತ್ರರಂಗಕ್ಕೆ ನಷ್ಟ: ಭಾರತೀಯ ಚಿತ್ರರಂಗದ ಹಿರಿಯ ಕೊಂಡಿಯಂತಿದ್ದ ಅವರ ಅಗಲಿಕೆ ಚಲನಚಿತ್ರ ಕ್ಷೇತ್ರಕ್ಕೆ ಹಾಗೂ ಅಭಿಮಾನಿಗಳಿಗೆ ಭರಿಸಲಾರದ ನಷ್ಟವಾಗಿದೆ.



