Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನ ಪರಿಷತ್ ಚುನಾವಣೆ ತಲ್ಲಣ; ಕ್ರಾಸ್ ವೋಟಿಂಗ್ ಭೀತಿಯಲ್ಲಿ ಕಾಂಗ್ರೆಸ್ ಶಾಸಕರು

Advertisement
Advertisement

ಚಂದ್ರವಳ್ಳಿ ನ್ಯೂಸ್, ಬಿಡದಿ:
ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್‌ನ
7 ಸ್ಥಾನಗಳಿಗೆ ಜೂನ್ 18 ರಂದು ಗುರುವಾರ ನಡೆಯಲಿರುವ ದ್ವೈವಾರ್ಷಿಕ ಚುನಾವಣೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಪ್ರತಿಪಕ್ಷಗಳ 'ಕ್ರಾಸ್ ವೋಟಿಂಗ್' (ಮತ ವಿಭಜನೆ) ತಂತ್ರಕ್ಕೆ ಪ್ರತಿತಂತ್ರ ಹೂಡಿರುವ ಆಡಳಿತಾರೂಢ ಕಾಂಗ್ರೆಸ್, ತನ್ನ ಶಾಸಕರ ಮತಗಳನ್ನು ರಕ್ಷಿಸಿಕೊಳ್ಳಲು ಕೊನೆಗೂ 'ರೆಸಾರ್ಟ್ ರಾಜಕಾರಣ'ದ ಮೊರೆ ಹೋಗಿದೆ.

ತನ್ನ ಎಲ್ಲಾ ಶಾಸಕರನ್ನು ಬಿಡದಿಯ ಇನ್ವೆಂಟ್/ವಂಡರ್ ಲಾ ರೆಸಾರ್ಟ್‌ಗೆ ಶಿಫ್ಟ್ ಮಾಡಿರುವ ಕಾಂಗ್ರೆಸ್ ಹೈಕಮಾಂಡ್, ಶಾಸಕರ ಮೇಲೆ ಹದ್ದಿನ ಕಣ್ಣಿಟ್ಟಿದೆ.

ರೆಸಾರ್ಟ್‌ನಲ್ಲಿ ಹೈಡ್ರಾಮಾ: ಅಣಕು ಮತದಾನ ಪ್ರಕ್ರಿಯೆ
ಇಂದು ಚುನಾವಣೆಯಲ್ಲಿ ಯಾವುದೇ ಒಂದು ಮತವೂ ವ್ಯರ್ಥವಾಗದಂತೆ ತಡೆಯಲು ಕಾಂಗ್ರೆಸ್ ರೆಸಾರ್ಟ್‌ನಲ್ಲಿ ಶಾಸಕರಿಗಾಗಿ
'ಅಣಕು ಮತದಾನ' ಆಯೋಜಿಸಿತ್ತು. ಮತದಾನದ ಪ್ರಕ್ರಿಯೆ ಹಾಗೂ ಆದ್ಯತೆಯ ಮತಗಳ ಕುರಿತು ಶಾಸಕರಿಗೆ ಗೊಂದಲ ನಿವಾರಿಸಲಾಯಿತು.

ಗಮನಾರ್ಹ ಅಂಶ: ಈ ಮಹತ್ವದ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಭಾಗವಹಿಸಿ, ಶಾಸಕರಿಗೆ ಕಟ್ಟುನಿಟ್ಟಿನ ವಿಪ್ ಪಾಲಿಸುವಂತೆ ಸೂಚನೆ ನೀಡಿದರು.

7ನೇ ಸ್ಥಾನಕ್ಕಾಗಿ ಬಿರುಸಿನ ಜಟಾಪಟಿ: ಯಾರಿಗೆ ಗೆಲುವು?
ವಿಧಾನ ಪರಿಷತ್‌ನ
7 ಸ್ಥಾನಗಳ ಪೈಕಿ ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್‌ನ ನಾಲ್ವರು ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಮೇಲ್ಮನೆ ಪ್ರವೇಶಿಸುವುದು ನಿಶ್ಚಿತವಾಗಿದೆ. ಆದರೆ, ಕಣದಲ್ಲಿರುವ 7ನೇ ಅಭ್ಯರ್ಥಿ ಇಡೀ ಚುನಾವಣಾ ಕಣವನ್ನು ರಂಗೇರಿಸಿದ್ದಾರೆ. 

ಪ್ರಸ್ತುತ ಕಣದಲ್ಲಿ ಕಾಂಗ್ರೆಸ್ 5, ಬಿಜೆಪಿ 2 ಹಾಗೂ ಜೆಡಿಎಸ್ 1 ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. 7ನೇ ಸ್ಥಾನಕ್ಕಾಗಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಹಾಗೂ ಜೆಡಿಎಸ್ ಅಭ್ಯರ್ಥಿ ಗೋವಿಂದ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಈ ಸ್ಥಾನವನ್ನು ಹೇಗಾದರೂ ಮಾಡಿ ತನ್ನದಾಗಿಸಿಕೊಳ್ಳಲು ಉಭಯ ಪಾಳಯಗಳೂ ಮೈತ್ರಿ ಮತ್ತು ರಹಸ್ಯ ತಂತ್ರಗಳನ್ನು ಹೆಣೆಯುತ್ತಿವೆ.

ಕಾಂಗ್ರೆಸ್ ರೆಸಾರ್ಟ್‌ನಲ್ಲಿ ಬಿಜೆಪಿ ಬಂಡಾಯ ಶಾಸಕರ ಪ್ರತ್ಯಕ್ಷ!
ಈ ಎಲ್ಲ ಬೆಳವಣಿಗೆಗಳ ಮಧ್ಯೆ
, ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ಶಾಸಕರು ತಂಗಿರುವ ಬಿಡದಿಯ ರೆಸಾರ್ಟ್‌ನಲ್ಲಿ ಕಾಣಿಸಿಕೊಂಡಿರುವುದು ತೀವ್ರ ಕುತೂಹಲ ಮೂಡಿಸಿದೆ.

ಜೆಡಿಎಸ್ ಮತ್ತು ಬಿಜೆಪಿಯ ಕೆಲವು ಅತೃಪ್ತ ಶಾಸಕರ ಮತಗಳನ್ನು ಸೆಳೆಯಲು ಕಾಂಗ್ರೆಸ್ ತೆರೆಮರೆಯ ಕಸರತ್ತು ನಡೆಸುತ್ತಿರುವುದಕ್ಕೆ ಈ ಇಬ್ಬರು ನಾಯಕರ ಎಂಟ್ರಿಯೇ ಸಾಕ್ಷಿ ಎನ್ನಲಾಗುತ್ತಿದೆ. ವಿರೋಧ ಪಕ್ಷಗಳ ಕೋಟೆಗೆ ಕನ್ನ ಹಾಕಲು ಕಾಂಗ್ರೆಸ್ ತಂತ್ರ ರೂಪಿಸುತ್ತಿದ್ದರೆ, ಅತ್ತ ಮೈತ್ರಿಕೂಟವು ತನ್ನ ಮತಗಳನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದೆ. ನಾಳೆ ನಡೆಯಲಿರುವ ಮತದಾನದಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು ಇಡೀ ರಾಜ್ಯದ ಕುತೂಹಲಕ್ಕೆ ಕಾರಣವಾಗಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ರಾಮೀಣ ಪತ್ರಕರ್ತರ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆ ಶೀಘ್ರ ಜಾರಿಗೆ ಕೆಯುಡಬ್ಲ್ಯೂಜೆ ಆಗ್ರಹಜೂನ್ 20ರಂದು ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆಟಿ. ಎಂ. ಸಿ. ಬ್ಯಾಂಕ್ ಸರ್ವ ಸದಸ್ಯರ ಸಭೆದೊಡ್ಡಬಳ್ಳಾಪುರ ತಿರುವಣ್ಣ ಮಲೈ ಮಾರ್ಗದ ಕೆಎಸ್ಆರ್ ಟಿಸಿ ಸೇವೆ ಮುಂದುವರೆಸಲು ಒತ್ತಾಯಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿಗಳಿಂದ ಗೌರವ ಪುರಸ್ಕಾರ"ಸಿಎಂ ಆದ ಮೇಲಾದರೂ ನೀಲಿ ಚಿತ್ರ, ಪೋಸ್ಟರ್ ಮಾಡೋದು ಬಿಡ್ತಾರೆ ಅಂದ್ಕೊಂಡಿದ್ದೆ" – ಡಿಕೆಶಿ ವಿರುದ್ಧ ಹೆಚ್‌ಡಿಕೆ ಬಾಂಬ್!ಹಿರಿಯೂರಿನಲ್ಲಿ ರೈತರ ಕುಂದುಕೊರತೆ ಸಭೆ: ವಿವಿಧ ಇಲಾಖೆಗಳಿಂದ ಸ್ಥಳದಲ್ಲೇ ಪರಿಹಾರಮಧ್ಯರಾತ್ರಿ ಸ್ನೇಹಿತನಿಗೆ ಕರೆ ಮಾಡಿ ಪಿಎಸ್‌ಐ ಬಸವರಾಜ ಹೆರೂರ್ ಆತ್ಮಹತ್ಯೆ!ವಿಧಾನ ಪರಿಷತ್ ಚುನಾವಣೆ ತಲ್ಲಣ; ಕ್ರಾಸ್ ವೋಟಿಂಗ್ ಭೀತಿಯಲ್ಲಿ ಕಾಂಗ್ರೆಸ್ ಶಾಸಕರುಪಿಎಚ್‌ಡಿ ವಿದ್ಯಾರ್ಥಿನಿ ಲೈಂಗಿಕ ಸಂಪರ್ಕ; ಪ್ರಾಧ್ಯಾಪಕ ದೇವರಾಜನ್ ಅಮಾನತು