Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವನಾಥ್ ಆರೋಪ ಸುಳ್ಳು-ಮಧು ಕುಮಾರ್

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರಾತೋ ರಾತ್ರಿ ಮನೆಯನ್ನು ಯಾವುದೇ ಮಾಹಿತಿ ನೀಡದೆ
ಏಕಾಏಕಿ ಜೆಸಿಬಿಯಿಂದ ಧ್ವಂಸಗೊಳಿಸಿದ್ದಾರೆ ಎಂದು ವಿಶ್ವನಾಥ್ ಸುಳ್ಳು ಆರೋಪ ಮಾಡಿದ್ದಾರೆ ಎಂದು ವೀರಾಪುರ ಗ್ರಾಮದ ಸರ್ವೇ ನಂಬರ್ 115 ರ ಜಮೀನು ಮಾಲೀಕ ಮಧು ಕುಮಾರ್ ತಿಳಿಸಿದ್ದಾರೆ.

ತಾಲ್ಲೂಕಿನ ಹೊರವಲಯದ ವೀರಪುರದಲ್ಲಿ ಈ ಹಿಂದೆ ವಿಶ್ವನಾಥ್ ಎಂಬುವರು  ನಮ್ಮ ಮನೆಯನ್ನು  ಜೆಸಿಪಿಯಿಂದ ನೆಲಸಮ ಮಾಡಲಾಗಿದೆ. ಮನೆಯ ಒಳಗಿದ್ದ ವಸ್ತುಗಳು ಸಂಪೂರ್ಣ ಹಾಳಾಗಿದ್ದು , ಕೋಳಿ ಹಾಗೂ ಮೇಕೆ ಗೆ ಹಾನಿ ಮಾಡಲಾಗಿದೆ ಎಂದು ಆರೋಪಿಸಿದ್ದರು.

ಈ ಕುರಿತಂತೆ ಜಮೀನು ಮಾಲೀಕ ಮಧುಕುಮಾರ್ ಮಾತನಾಡಿ ಈಗಾಗಲೇ ಹಲವಾರು ಬಾರಿ ಸರ್ವೆ ಮಾಡಿಸಿದ್ದೇವೆ. ವಿಶ್ವನಾಥ್ ರವರೇ ಖುದ್ದು ಸಹಿ ಹಾಕಿ  ಸರ್ವೇ ಒಪ್ಪಿಕೊಂಡಿದ್ದಾರೆ. ಆದರೆ ಪದೇ ಪದೇ  ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಾ ಸಮಸ್ಯೆ ಕೊಡುತ್ತಿದ್ದಾರೆ ಎಂದು ದೂರಿದರು.

ವೀರಪುರ ಗ್ರಾಮದ ಸರ್ವೇ ನಂಬರ್ 115ಕ್ಕೆ ಸಂಬಂಧಿಸಿದಂತೆ 32 ಗುಂಟೆ ಜಮೀನು ನಮ್ಮದಾಗಿದ್ದು ನಮ್ಮ ಪಕ್ಕದ 19 ಗುಂಟೆ ಜಮೀನು ವಿಶ್ವನಾಥ್ ಅವರಿಗೆ ಸೇರಿರುತ್ತದೆ ಆದರೆ ನಮ್ಮ ಜಮೀನು ನಮಗೆ ಬಿಟ್ಟುಕೊಡದೆ  ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈಗಾಗಲೇ ಹಲವಾರು ಬಾರಿ ಪೊಲೀಸ್ ಠಾಣೆಯಲ್ಲಿ ಮಾತುಕತೆ ನಡೆದಿದೆ ಆದರೂ ಯಾವುದೇ ಪ್ರಯೋಜನವಾಗಿಲ್ಲ , ತಾವೇ ಮನೆ ನೆಲಸಮ ಮಾಡಿಕೊಂಡು  ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ.

ಮನೆಯನ್ನು ಬಿಳಿಸುವ ಉದ್ದೇಶ ನಮ್ಮದಾಗಿದ್ದರೆ ಕೋರ್ಟ್ ಆದೇಶ ಪಡೆದು ಸಂಪೂರ್ಣ ಮನೆ ದ್ವಂಸಗೊಳಿಸುತ್ತಿದ್ದೆವು. ಆದರೆ ನಾವು ಆ ಕೆಲಸ ಮಾಡಿಲ್ಲ  ಮನೆ ಖಾಲಿ ಮಾಡಿಕೊಡುವಂತೆ ಮನವಿ ಮಾಡಿದ್ದೆವು. ಅದಕ್ಕೆ ವಿಶ್ವನಾಥ್ ಕೂಡ ಒಪ್ಪಿದ್ದರು. ಈಗ ಏಕಾಏಕಿ ಬಂದು ನಾವು ಅವರ ಮನೆ ಧ್ವಂಸಗೊಳಿಸಿದ್ದೇವೆ  ಹಾನಿ ಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ.

ಮನೆಯಲ್ಲಿದ್ದ ವಸ್ತುಗಳು, ಅಡುಗೆ ಪಾತ್ರೆಗಳು ಸಂಪೂರ್ಣ ಹಾಳಾಗಿದ್ದು , ತಾವು ಸಾಕಿದ್ದ ಕೋಳಿಗಳು ಗೋಡೆ ಕೆಳಗೆ ಸಿಲುಕಿ ಸಾವನಪ್ಪಿವೆ ಗೋಡೆ ಬಿದ್ದ ಪರಿಣಾಮ ಮೇಕೆ ಮರಿಯ ಕಾಲು ಮುರಿದಿದೆ ಎಂದು ವಿಶ್ವನಾಥ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ ಇದು ಎಲ್ಲವೂ ಸುಳ್ಳು ಸತ್ಯಕ್ಕೆ ದೂರವಾದ ಮಾತು. ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿಕೊಳ್ಳುತ್ತೇವೆ ಎಂದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST